ಬೆಂಗಳೂರು, ಜೂ ೩: ತಮಿಳು ನಟ ಕಮಲ್‌ ಹಾಸನ್‌ ಅವರು ಕನ್ನಡ ಭಾಷೆಯ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯಿಂದ ಕನ್ನಡಿಗರು ಗರಂ ಆಗಿದ್ದಾರೆ. ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದ್ದು ಎಂದು ದಡ್ಡತನದ ಹೇಳಿಕೆಯೊಂದನ್ನು ನೀಡಿ ಕನ್ನಡ ಚಿತ್ರರಂಗದಲ್ಲೂ ಒಂದು ಕಾಲದಲ್ಲಿ ಮೆರದ ನಟ, ಇಂದು ತಮ್ಮ ಹೊಸ ತಮಿಳು ಚಿತ್ರ ʼಥಗ್‌ ಲೈಫ್‌ʼ ಅನ್ನು ಕರುನಾಡಿನಲ್ಲಿ ಬಿಡುಗಡೆ ಮಾಡಲು ಹರಸಾಹಸ ಪಡುತ್ತಿದ್ದಾರೆ. ವಿಪರ್ಯಾಸವೆಂದರೇ, ಈ ಹೇಳಿಕೆ ನೀಡಿದ್ದು ʼಥಗ್‌ ಲೈಫ್‌ʼ ಸಿನಿಮಾದ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಅದೂ ಕರುನಾಡ ಚಕ್ರವರ್ತಿ ಡಾ ಶಿವರಾಜ್  ಕುಮಾರ್‌ ಅವರ ಸಮ್ಮುಖದಲ್ಲಿ.

ಹೇಳಿಕೆಗೆ ಕರುನಾಡಿನ ಜನತೆ ಕೆಂಡಾಮಂಡಲವಾಗಿದ್ದು, ಸ್ಯಾಂಡಲ್‌ವುಡ್‌ನ ಬಹುತೇಕ ಹಿರಿಯ-ಕಿರಿಯ ನಟ ನಟಿಯರು ಕಮಲ್‌ ಹಾಸನ್‌ ಅವರ ದಡ್ಡತನದ ಹೇಳಿಕೆಗೆ ವ್ಯಾಪಕವಾಗಿ ವಿರೋಧಿಸಿದ್ದರು. ಕನ್ನಡ ಪರ ಹೋರಾಟಗಾರರು ಕೂಡ ಕಮಲ್‌ ಹಾಸನ್‌ ಅವರು ಕ್ಷಮೆ ಯಾಚಿಸಬೇಕು, ಇಲ್ಲದಿದ್ದರೆ, ಅವರ ಚಿತ್ರವನ್ನು ಕರ್ನಾಡಕದಲ್ಲಿ ಬಿಡುಗಡೆಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಧರಣಿಗಳನ್ನ ಮಾಡಿದ್ದಾರೆ. ಇಷ್ಟಾದರೂ ಕಮಲ್‌ ಹಾಸನ್‌ ಅವರು ಕನ್ನಡಿಗರಲ್ಲಿ ಕ್ಷಮೆ ಕೇಳದೆ ಉದ್ಧಟತನ ಮೆರೆದಿದ್ಧಾರೆ.

ಇನ್ನೂ ಈ ಪ್ರಕರಣ ಹೈಕೋರ್ಟ್‌ ಮೆಟ್ಟಿಲೇರಿದೆ. ತಮ್ಮ ‘ಥಗ್ ಲೈಫ್’ ಚಿತ್ರ ಕರ್ನಾಟಕದಲ್ಲಿ ಬಿಡುಗಡೆಗೆ ಅವಕಾಶ ನೀಡುವಂತೆ ಮತ್ತು ಭದ್ರತೆ ಕೋರಿ ಕಮಲ್ ಹಾಸನ್ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಆದರೇ ಅದೇ ಕೋರ್ಟ್‌ ಈಗ ಕಮಲ್‌ ಹಾಸನ್‌ಗೆ ಛೀಮಾರಿ ಹಾಕಿದೆ. ಮೊದಲು ಕ್ಷಮೆ ಕೇಳಿ ಎಂದು ನ್ಯಾಯಾಲಯ ಹೇಳಿದೆ.  ಕಮಲ್ ಹಾಸನ್‌ ಅವರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. “ಸಿ. ರಾಜಗೋಪಾಲಚಾರಿ ಇದೇ ರೀತಿಯ ಹೇಳಿಕೆ ನೀಡಿದ್ದರು. ನಂತರ ಅವರು ಕ್ಷಮಾಯಾಚನೆ ಮಾಡಿದ್ದರು. ಆದರೆ ಕಮಲಹಾಸನ್ ಯಾವುದೇ ಕ್ಷಮಾಯಾಚನೆ ಮಾಡಿಲ್ಲ” ಎಂದು ಏಕ ಸದಸ್ಯ ಪೀಠ ತಿಳಿಸಿದೆ.

“ಸಿನಿಮಾ ಮಾಡಿರೋದು ವಾಣಿಜ್ಯ ಉದ್ದೇಶದಿಂದ. ಈಗ ತಪ್ಪು ಮಾಡಿದ್ದಾರೆ. ಅಂದಮೇಲೆ ಕ್ಷಮೆ ಕೇಳಬೇಕು. ನೀವು ಮಾಡಿದ ತಪ್ಪಿಗೆ ಪೊಲೀಸರು ಭದ್ರತೆ ನೀಡಬೇಕೇ” ಎಂದು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಪೀಠ ಕಮಲ್ ಹಾಸನ್‌ ಅವರ ವಕೀಲರನ್ನು ತರಾಟೆಗೆ ತೆಗೆದುಕೊಂಡಿತು.

“ನಿಮ್ಮ ಹೇಳಿಕೆಯಿಂದ ಶಿವರಾಜಕುಮಾರ್ ಅನುಭವಿಸುವಂತಾಗಿದೆ. ಶಿವರಾಜುಕುಮಾರ್‌ಗೆ ಕೂಡ ಇದರಿಂದ ಸಮಸ್ಯೆಯಾಗಿದೆ. ನಿಮ್ಮ ಹೇಳಿಕೆ ನೀರಾಕರಿಸಿದ್ದೀರಾ? ಇಲ್ಲ. ನೀವು ಹೇಳಿಕೆಯನ್ನು ನಿರಾಕರಿಸಿಲ್ಲ, ಒಪ್ಪಿಕೊಂಡಿದ್ದೀರಾ. ನೀವು ಕ್ಷಮೆಯಾಚಿಸಿದರೆ ಸಮಸ್ಯೆ ಇಲ್ಲ. ಆದರೆ ಕಮಲ್ ಕ್ಷಮೆಕೇಳಲು ಸಿದ್ದವಿಲ್ಲ” ಎಂದು ಛೀಮಾರಿ ಹಾಕಿದ್ದಾರೆ.

“ಕರ್ನಾಟಕದಲ್ಲಿ ಚಿತ್ರಯಾಕೆ ಬಿಡುಗಡೆಯಾಗಬೇಕು? ನಿಮ್ಮ ತಪ್ಪಿಗೆ ಪೊಲೀಸರು ಭದ್ರತೆ ನೀಡಬೇಕೇ? ನಾನೂ ಥಗ್ ಲೈಫ್ ಸಿನಿಮಾ ನೋಡಲು ಬಯಸಿದ್ದೆ. ಆದರೆ ಈ ವಿವಾದದಿಂದ ನೋಡಲು ಸಾಧ್ಯವಿಲ್ಲ. ಆದೇಶ ಹೊರಡಿಸಲು ನಮಗೆ ಸಮಸ್ಯೆ ಇಲ್ಲ. ಕ್ಷಮೆ ಕೇಳಲಾಗದಿದ್ದರೆ ಬಿಡಿ. ಕರ್ನಾಟಕದಲ್ಲಿ ಬಿಡುಗಡೆ ಏಕೆ ಬೇಕು? ಯಾರೊಬ್ಬರ ಭಾವನೆಯ ಮೇಲೆ ಸವಾರಿ ಮಾಡಬಾರದು” ಎಂದು ಹೇಳಿದ್ದಾರೆ.

“1950 ರಲ್ಲಿ ರಾಜಗೋಪಾಲಾಚಾರಿ ಕ್ಷಮೆ ಕೇಳಿದ್ದಾರೆ. ಈಗ ನಿಮ್ಮ ತಪ್ಪಿಗೆ ಕ್ಷಮೆ ಕೇಳಲು ಏನು ಸಮಸ್ಯೆ. 300  ಕೋಟಿಯ ಸಿನಿಮಾ ಎನ್ನುತ್ತಿದ್ದೀರಾ, ಕ್ಷಮೆಯಾಚನೆ ಮಾಡಿ. ನಿಮ್ಮ ನಿಲುವೇನು ತಿಳಿಸಿ” ಎಂದು ಹೈಕೋರ್ಟ್ ಸೂಚನೆ ನೀಡಿದೆ.

ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 2.30 ಕ್ಕೆ ಮುಂದೂಡಿಕೆ ಮಾಡಿದ್ದು, ನಿಲುವು ಎಂದು ತಿಳಿಸಲು ಸಮಯ ನೀಡಲಾಗಿದೆ.

ಥಗ್ ಲೈಫ್ ಚಿತ್ರ ಈ ತಿಂಗಳ 5 ರಂದು ದೇಶಾದ್ಯಂತ ಬಿಡುಗಡೆಯಾಗಲಿದೆ. ಆದರೆ ಕರ್ನಾಟಕದಲ್ಲಿ ಬಿಡುಗಡೆಯ ಬಗ್ಗೆ ಅನಿಶ್ಚಿತತೆ ಇದೆ. ಕಮಲ್ ಅರ್ಜಿಯ ಕುರಿತು ನ್ಯಾಯಾಲಯದ ತೀರ್ಪಿನ ಬಗ್ಗೆ ಸಾಕಷ್ಟು ಉತ್ಸಾಹವಿದೆ. ಸುಮಾರು 35 ವರ್ಷಗಳ ನಂತರ ನಿರ್ದೇಶಕ ಮಣಿರತ್ನಂ ಮತ್ತು ಕಮಲ್ ಹಾಸನ್ ಒಂದಾಗುತ್ತಿರುವ ಈ ಚಿತ್ರದ ಮೇಲೆ ಭಾರಿ ನಿರೀಕ್ಷೆಗಳಿವೆ.

ಈ ವಿಷಯದ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ‘ಈಗ ಕೋರ್ಟ್ ಹೇಳಿದೆ. ಕಮಲ್ ಹಾಸನ್ ಅವರು ನ್ಯಾಯಾಲಯಕ್ಕೆ ಗೌರವ ಕೊಡುತ್ತಾರೆ. ನಮ್ಮವರು ಯಾರೂ ಕೂಡ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಪ್ರತಿಭಟನೆ ಮಾಡಲಿ, ತಪ್ಪಿಲ್ಲ. ಆದರೆ ಯಾರೂ ಕೂಡ ಚಿತ್ರಮಂದಿರಗಳ ಬಳಿ ಹೋಗಿ ಗಲಾಟೆ ಮಾಡಬಾರದು. ಜಾತಿ ಕಲಹ ಉಂಟುಮಾಡುವ ಕೆಲಸ ದಯವಿಟ್ಟು ಮಾಡಬಾರದು’ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Shares:

Related Posts

ಮನರಂಜನೆ

ಬಾಲಿವುಡ್‌ ಸ್ಟಾರ್‌ ಜೊತೆ ಹೊಂಬಾಳೆ ಫಿಲ್ಮ್ಸ್‌ ಸಿನಿಮಾ

ಬೆಂಗಳೂರು: ಹೊಂಬಾಳೆ ಫಿಲಮ್ಸ್, ಕನ್ನಡ ಸಿನಿಮಾಗಳ (Kannada Cinema) ಶಕ್ತಿಯನ್ನು ದೇಶಕ್ಕೆ ಪರಿಚಯಿಸಿದ ನಿರ್ಮಾಣ ಸಂಸ್ಥೆ. ಕನ್ನಡ ಸಿನಿಮಾಗಳಿಗೆ ಮಾರುಕಟ್ಟೆ ಇಲ್ಲ. ಸೀಮಿತ ಬಜೆಟ್​ನಲ್ಲಿ ಮಾತ್ರವೇ ಸಿನಿಮಾ ಮಾಡಬೇಕು ಎಂಬ ಮಾತುಗಳು ಚಾಲ್ತಿಯಲ್ಲಿದ್ದ ಸಮಯದಲ್ಲಿ, ಕನ್ನಡ ಸಿನಿಮಾಗಳ ಮೇಲೆ ಊಹೆಗೂ ಮೀರಿದ
ರಾಷ್ಟ್ರೀಯ

ಐಫೆಲ್‌ ಟವರ್‌ಗೂ ಎತ್ತರದ ಈ ಬ್ರಿಡ್ಜ್‌ ಭಾರತದ ಹೆಮ್ಮೆ

ನವದೆಹಲಿ, ಜೂನ್ 3: ಭಾರತೀಯ ಸಂಪರ್ಕಕ್ಕೆ ಒಂದು ಮಹತ್ವದ ಹೆಜ್ಜೆಯಾಗಿ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯನ್ನು (Chenab Railway Bridge) ಜೂನ್ 6ರಂದು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ. ಕೇಂದ್ರ ಬಾಹ್ಯಾಕಾಶ ಸಚಿವ ಡಾ ಜಿತೇಂದ್ರ ಸಿಂಗ್
ಆರೋಗ್ಯ ಮತ್ತು ಜೀವನಶೈಲಿ

ಪಂಚಾಯಿತಿಗಳಿಗೆ ಅಧಿಕಾರ ವಿಕೇಂದ್ರೀಕರಣ ಸೂಚ್ಯಂಕ; ದೇಶದಲ್ಲೇ ಕರ್ನಾಟಕಕ್ಕೆ ಅಗ್ರಸ್ಥಾನ

ಬೆಂಗಳೂರು: ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆ (ಐಐಪಿಎ) ಮತ್ತು ಪಂಚಾಯತ್ ರಾಜ್ ಸಚಿವಾಲಯದ ಅಧ್ಯಯನದ ಪ್ರಕಾರ ಪಂಚಾಯಿತಿಗಳಿಗೆ ಅಧಿಕಾರ ವಿಕೇಂದ್ರೀಕರಣ ಶ್ರೇಯಾಂಕದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ. ರಾಜ್ಯಕ್ಕೆ ಈ ಮನ್ನಣೆ ಸಿಕ್ಕಿರುವುದು ತಳಮಟ್ಟದಲ್ಲಿ ಪ್ರಜಾಪ್ರಭುತ್ವವನ್ನು
ಆರೋಗ್ಯ ಮತ್ತು ಜೀವನಶೈಲಿ

ಅಮೆರಿಕಾದಿಂದ ಗಡಿಪಾರಾದ 112 ಭಾರತೀಯರ 3ನೇ ಬ್ಯಾಚ್ ಇಂದು ಭಾರತಕ್ಕೆ

ಚಂಡೀಗಢ: ಅಮೆರಿಕದಿಂದ ಗಡೀಪಾರು ಮಾಡಲಾದ 112 ಭಾರತೀಯರು ಇರುವ ಅಮೆರಿಕ ವಾಯುಪಡೆಯ ವಿಶೇಷ ವಿಮಾನ C17 ಗ್ಲೋಬ್‌ಮಾಸ್ಟರ್ III ಇಂದು (ಫೆ.16 ರಂದು) ರಾತ್ರಿ ತಡರಾತ್ರಿ ಅಮೃತಸರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ನಿರೀಕ್ಷೆಯಿದೆ. ಅಮೆರಿಕದಿಂದ ಗಡಿಪಾರು ಮಾಡಲಾದ 112 ಜನರಲ್ಲಿ
Leave a Reply

Your email address will not be published. Required fields are marked *