ಬೆಂಗಳೂರು: ಶಾಸಕರಾದ ಎಸ್ಟಿ  ಸೋಮಶೇಖರ್ ಹಾಗೂ (ST Somashekhar) ಶಿವರಾಮ್ ಹೆಬ್ಬಾರ್ (Shivaram Hebbar) ಅವರನ್ನು ಭಾರತೀಯ ಜನತಾ ಪಕ್ಷದಿಂದ (BJP) ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಉಚ್ಛಾಟಿಸಲಾಗಿದೆ. ಇಬ್ಬರನ್ನು ೬ ವರ್ಷಗಳ ಕಾಲ ಉಚ್ಚಾಟನೆ (Expelled) ಮಾಡಿ ಬಿಜೆಪಿ ಹೈಕಮಾಂಡ್ (BJP High command) ಆದೇಶ ಹೊರಡಿಸಿದೆ.

ಇತ್ತೀಚಿಗಷ್ಟೇ ಬಸವನಗೌಡ ಪಾಟೀಲ ಯತ್ನಾಳ್‌ ಅವರನ್ನು ಉಚ್ಛಾಟಿಸಿದ್ದ ಬಿಜೆಪಿ ಹೈಕಮಾಂಡ್ , ಇದೀಗ ಮತ್ತೊಂದು ಇಂತಹದ್ದೇ ಕ್ರಮ ತೆಗೆದುಕೊಂಡಿದೆ. ಶಾಸಕರಾದ ಎಸ್‌ ಟಿ ಸೋಮಶೇಖರ ಮತ್ತು ಶಿವರಾಂ ಹೆಬ್ಬಾರ್‌ ಇಬ್ಬರೂ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ ಅವರು ನೀಡಿದ್ದ ಔತಣಕೂಟದಲ್ಲಿ ಬಾಗವಹಿಸಿದ್ದರು. ಅಲ್ಲದೇ ನಿರಂತರವಾಗಿ ಬಿಜೆಪಿ ರಾಜ್ಯ ನಾಯಕತ್ವದ ವಿರುದ್ಧ ಹೇಳಿಕೆಗಳನ್ನು ನೀಡುತ್ತಾ, ಕಾಂಗ್ರೆಸ್‌ ಆಡಳಿತದ ಪರವಾಗಿ ಮಾತನಾಡಿದ್ದು, ಇದನ್ನೆಲ್ಲ ಹೈಕಮಾಂಡ್‌ ಗಂಭೀರವಾಗಿ ಪರಿಗಣಿಸಿ, ಕ್ರಮ ತೆಗೆದುಕೊಂಡಿದ್ದು, ಉಚ್ಛಾಟನೆಯ ನೋಟೀಸ್‌ ಕಳುಹಿಸಿದೆ.

ಈ ಮೂಲಕ ಪಕ್ಷದ ವರಿಷ್ಠರು ಕಾರ್ಯಕರ್ತರಿಗೆ ಖಡಕ್‌ ಎಚ್ಚರಿಕೆ ನೀಡಿದಂತಿದೆ. ತಿಂಗಳ ಆರಂಭದಲ್ಲಿ ಈ ಕುರಿತು ಮಾತನಾಡಿದ್ದ ಪಕ್ಷದ ಅಧ್ಯಕ್ಷ ಬಿ ವೈ ವಿಜಯೇಂದ್ರ, ಪಕ್ಷ ವಿರೋಧಿ ಚಟುವಟಿಕೆ ಆರೋಪ ಹೊತ್ತ ಇಬ್ಬರು ಶಾಸಕರನ್ನು ಈ ತಿಂಗಳಾಂತ್ಯಕ್ಕೆ ಪಕ್ಷದಿಂದ ಉಚ್ಚಾಟನೆ ಮಾಡಲಾಗುವುದು ಎಂದು ತಿಳಿಸಿದ್ದರು. ವಿಧಾನಸಭಾ ಚುನಾವಣೆಯ ನಂತರ ಬಿಜೆಪಿ ಶಾಸಕರಾದ ಎಸ್‌ ಟಿ ಸೋಮಶೇಖರ್ ಹಾಗೂ ಶಿವರಾಮ ಹೆಬ್ಬಾರ್ ನಿರಂತರ ಪಕ್ಷ ದ್ರೋಹ ಮಾಡಿದ್ದಾರೆ. ಕಳೆದ ಲೋಕಸಭಾ ಮತ್ತು ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಇವರಿಬ್ಬರ ಬಗ್ಗೆ ಕೇಂದ್ರ ಶಿಸ್ತು ಸಮಿತಿ ಅಧ್ಯಕ್ಷ ಓಂ ಪಾಟೀಲ್ ಅವರಿಗೆ ವರದಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದರು.

ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಕ್ಷೇತ್ರಕ್ಕೆ ತೆರಳಿ ವರದಿ ಸಿದ್ಧಪಡಿಸಿದ್ದೇನೆ. ಪಕ್ಷದ ಕಾರ್ಯಕರ್ತರ ಮತ್ತು ಅಲ್ಲಿನ ಮಂಡಳಿ ಅಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರಿಂದ ವರದಿ ಸಿದ್ದಪಡಿಸಿ ನೀಡಿದ್ದೇನೆ. ಅಲ್ಲದೇ ಇಬ್ಬರು ಶಾಸಕರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ವಿಡಿಯೋ ಮತ್ತು ಪೇಪರ್ ಕಟಿಂಗ್‌ಗಳನ್ನ ವರದಿಯ ಜೊತೆಗೆ ಸಲ್ಲಿಸಲಾಗಿದೆ. ಇಲ್ಲಿಯವರೆಗೂ ಎರಡು ಮೂರು ಬಾರಿ ಕೇಂದ್ರಕ್ಕೆ ವರದಿ ನೀಡಲಾಗಿದೆ ಎಂದಿದ್ದರು.

Shares:

Related Posts

Nothing Found! Ready to publish your first post? Get started here.

Leave a Reply

Your email address will not be published. Required fields are marked *